ವಿದ್ಯಾರ್ಥಿಗಳು ಯೋಧರಂತೆ ಗುರಿ ಸಾಧಿಸುವ ಉತ್ಸಾಹದಲ್ಲಿರಬೇಕು : ಸುಬ್ರಮಣ್ಯ ನಟ್ಟೋಜ

ಪುತ್ತೂರು: ಸಾಧನಾ ಪಥದಲ್ಲಿ ಗುರಿ ಮುಟ್ಟಲು ವಿದ್ಯಾರ್ಥಿಗಳು ಶಸ್ತ್ರ ಸನ್ನದ್ಧರಾದ ಯೋಧರಂತೆ ಜಾಗೃತರಾಗಿರಬೇಕು. ನಮ್ಮ ನಮ್ಮ ಕರ್ತವ್ಯಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಬೇಕಾದದ್ದು ನಮ್ಮ ಧರ್ಮ. ವಿದ್ಯಾರ್ಥಿಗಳು ವಿದ್ಯಾರ್ಜನೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು. ಅಂದಂದು ಮಾಡಬೇಕಾದ ಕೆಲಸ ಕಾರ್ಯಗಳನ್ನು ಅಂದಂದೇ ಮಾಡುವ ಅಭ್ಯಾಸವನ್ನು ವಿದ್ಯಾರ್ಥಿಗಳು ಜಾರಿಗೊಳಿಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾಥಿಗಳಿಗಾಗಿ ಆರಂಭಿಸಿದ ರಜಾದಿನಗಳ ತರಗತಿಗಳನ್ನು ಉದ್ಘಾಟಿಸಿ ಗುರುವಾರ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಸಿಇಟಿ, ನೀಟ್, ತರಗತಿ ಪರೀಕ್ಷೆ, ಸಮಯ ಪಾಲನೆ ಇವುಗಳ ಮಾಹಿತಿ ಹಾಗೂ ಸಲಹೆಗಳನ್ನು ನೀಡಿ ಶುಭ ಹಾರೈಸಿದರು.

ತದನಂತರ ನಡೆದ ಒರಿಯಂಟೇಶನ್ ತರಗತಿಯಲ್ಲಿ ಸಿಇಟಿ ಕೋಚಿಂಗ್ ಸಂಯೋಜಕರಾದ ಕಿಶೋರ್ ಭಟ್ ಮಾತನಾಡಿ ಹೇಗೆ ಓದಬೇಕು? ಯಾವುದನ್ನು ಓದಬೇಕು? ಎಷ್ಟು ಓದಬೇಕು? ಸಮಯದ ಮಹತ್ವ ಮುಂತಾದ ವಿಷಯಗಳ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಧರಣಿ ಮತ್ತು ಸುಮೇಧಾ ಪ್ರಾರ್ಥಿಸಿದರು. ಗಣಿತ ಉಪನ್ಯಾಸಕಿ ಜ್ಯೋತಿ ವಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…