ಕಕ್ಯಪದವು, ಸಪ್ಟೆಂಬರ್ 21, 2024 : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಅದ್ವೈತ” 2024 ಮೂಲಕ ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಹಲವಾರು ಮನೋರಂಜನಾ ಹಾಗೂ ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ದ್ವಿತೀಯ ವಿಭಾಗದ ವಿದ್ಯಾರ್ಥಿ ನಿಶ್ಮಿತಾ ಸ್ವಾಗತಿಸಿ, ಪವಿತ್ರ ವಂದಿಸಿದರು. ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಸ್ಥೆಯ ಸಂಯೋಜಕರಾದ ಶ್ರೀಯುತ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿ ಯಾಗಿ ಸಂಪನ್ನಗೊಂಡಿತು.