ಕುಂದಾಪುರ: ಮನುಷ್ಯನ ಮನಸ್ಸಿನಲ್ಲಿ ಅಹಂಕಾರವು ತುಂಬಿರಬಾರದು. ಅಹಂಕಾರ ತುಂಬಿದ ಮನುಷ್ಯನ ಜೀವನವು ಅವನನ್ನು ಅಧೋಗತಿಯತ್ತ ಕೊಂಡೊಯ್ಯುವುದು. ಹಿರಿಯರು ಹಾಕಿಕೊಟ್ಟಂತಹ ನೀತಿ-ನಿಯಮಗಳನ್ನು ಗೌರವಿಸಿ ಪಾಲಿಸಿಕೊಂಡು ಬಂದಲ್ಲಿ ಮನುಷ್ಯ ಜೀವನ ಸಾಫಲ್ಯತೆಯನ್ನು ಸಾಧಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಸುಣ್ಣಾರಿಯ ನಿವೃತ್ತ ದೈಹಿಕ ಶಿಕ್ಷಕ ಶ್ರೀ ಕಿರಣ್ ಕುಮಾರ್ ಬಿ. ಹೇಳಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವೀಯ ಮೌಲ್ಯಗಳು ಮತ್ತು ವೃತ್ತಿಪರ ನೀತಿ ಸಂಘ ಆಯೋಜಿಸಿದ ಮಾಹಿತಿ ಕಾರ‍್ಯಾಗಾರದಲ್ಲಿ ‘ಮಾನವ ಜೀವನದಲ್ಲಿ ನೈತಿಕತೆ’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಕೃತಿಯ ಅಸ್ತಿತ್ವವನ್ನು ಉಳಿಸುವುದು, ಗೌರವಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿ ಕೆ. ಸ್ವಾಗತಿಸಿ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೇಘಾ ಎಸ್. ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ವೈಷ್ಣವಿ ಎಮ್.ಎಸ್. ಅತಿಥಿಗಳನ್ನು ಪರಿಚಯಿಸಿ, ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…