ಕಕ್ಯಪದವು, 09 ಡಿಸೆಂಬರ್ 2024: ಎಲ್ ಸಿ ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ದಶಮಾನೋತ್ಸವದ ಪ್ರಯುಕ್ತ “ದಶೈಕ್ಯ 2024 “ಅಂತರ್ ಪ್ರೌಢಶಾಲಾ ಚಟುವಟಿಕೆ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಯುತ ಹರಿಕಿರಣ್ ಮುಖ್ಯ ಶಿಕ್ಷಕರು ಸರಕಾರಿ ಪ್ರೌಢಶಾಲೆ ಸರಳಿಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ದಶಮಾನೋತ್ಸವೆಂಬುದು ಪರ್ವಕಾಲ, ಕನಸುಗಳು ಸಾಕಾರವಾಗಲು ಸವಾಲು, ಸಂಕಲ್ಪ, ಸಾಧನೆ ಎಂಬ ಸಕಾರಗಳು ಬಹಳ ಮುಖ್ಯ , ಆ ನಿಟ್ಟಿನಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಕಾಯಕ ಶ್ಲಾಘನೀಯ ಎಂದು,ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಇವರು ಮಾತನಾಡಿ ಮಕ್ಕಳು ಕೇವಲ ಅಂಕಗಳಿಗೆ ಸೀಮಿತವಾಗದೆ ಎಲ್ಲಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವ್ಯಕ್ತಿಯಾಗಿ ಸಮಾಜದಲ್ಲಿ ರೂಪುಗೊಳ್ಳಬಹುದು ಎಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸೌಮ್ಯ ಎನ್ ಹಾಗೂ ವಿದ್ಯಾರ್ಥಿ ಕಾರ್ಯಕ್ರಮ ಸಂಯೋಜಕರಾದ ಮಹಮ್ಮದ್ ಸಾಬೀತ್ ಉಪಸ್ಥಿತರಿದ್ದರು.