ಕುಂದಾಪುರ, ಸೆಪ್ಟೆಂಬರ್ 20, 2024: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಆಶ್ರಯದಲ್ಲಿ ರಕ್ತದೊತ್ತಡದ ಮೇಲೆ ಮೊಬೈಲ್ ಆರೋಗ್ಯದ ಪರಿಣಾಮ ಎನ್ನುವ ವಿಷಯದ ಮೇಲೆ ಅರಿವು ಕಾರ್ಯಕ್ರಮ ಜರುಗಿತು .
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಣಿಪಾಲ ಇಲ್ಲಿನ ಜೆ.ಆರ್.ಎಫ್. ಆಗಿರುವ ಕುಮಾರಿ ಮಮತಾ ಅವರು ವಿದ್ಯಾರ್ಥಿಗಳಿಗೆ ಮಾತನಾಡಿ, ಮೊಬೈಲ್ ಹೆಲ್ತ್ ಅರಿವಿನ ಅವಶ್ಯಕ ಹಾಗೂ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಕಾಲೇಜಿನ ಪ್ರಾಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಕೆ.ಎಂ. ಸಿ. ಮಣಿಪಾಲದ ಜೆ.ಆರ್.ಎಫ್. ಆಗಿರುವ ಕುಮಾರಿ ಡೊಯ್ಲಿನ್ ಒಲಿವೆರ ಅವರು ಉಪಸ್ಥಿತರಿದ್ದರು.
ಈ ಸಂದರ್ಭ ಕಾಲೇಜಿನ ಯುವ ರೆಡ್ಕ್ರಾಸ್ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಸಹ ಸಂಯೋಜಕಿ ಮಾಲತಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.