ಉಡುಪಿ: ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೊಟೇಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಡಿ. 3 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಟಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ನಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀಟ‌ರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಲಾಡಿ, ಉಪ್ಪುಂದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರು ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್‌ ಅನ್ನು ನೀಡಲಾಗಿದೆ. ಇದು ಸರಿಯಲ್ಲ ಅಂತಹವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ ಆಪ್ ಅನ್ನು ಅಭಿವೃದ್ಧಿ ಪಡಿಸಿದ್ದು, “stop tobaco” ಆಪ್ ಆಗಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ಪಡಿಸಬೇಕು. ಸಾರ್ವಜನಿಕರು ಸಹ ಅದರ ಬಳಕೆ ಮಾಡಿಕೊಳ್ಳುವುದರೊಂದಿಗೆ ಆನ್‌ಲೈನ್ ನಲ್ಲಿ ಸೂಕ್ತ ಪ್ರಾಧಿಕಾರಕ್ಕೆ ಅಥವಾ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.

ಶಾಲಾ-ಕಾಲೇಜುಗಳ ಪ್ರಾಚಾರ್ಯರ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದಾರಾ ಎಂದು ನಿಗಾ ವಹಿಸುವುದರೊಂದಿಗೆ, ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಕೋಟ್ಟಾ ಕಾಯಿದೆ ಅನುಷ್ಠಾನ ಸಮಿತಿಗೆ ಕೂಡಲೇ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ 2024 ರ ಏಪ್ರಿಲ್‌ನಿಂದ ಈವರೆಗೆ 54 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, 151 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 16,070 ರೂ ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ದಾಳಿಗಳನ್ನು ನಿರಂತರವಾಗಿ ಆಗಿಂದಾಗ್ಗೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ, ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…