ಕೋಣಾಜೆ, 29 ಆಗಸ್ಟ್ 2025: ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ರವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವೆಂದು ಆಚರಿಸಲಾಗುತ್ತಿದ್ದು ಈ ದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕೋಣಾಜೆ ಇಲ್ಲಿಯ ದೈಹಿಕ ಶಿಕ್ಷಣ ವಿಭಾಗವು ಉಳ್ಳಾಲ ತಾಲೂಕು ವಲಯದ ವಿದ್ಯಾರ್ಥಿಗಳಿಗೆ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿದ್ದು, ಈ ಪಂದ್ಯಾಟದಲ್ಲಿ ಕೆ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವು ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವನ್ನು 1-0 ಅಂತರದಲ್ಲಿ ಸೋಲಿಸಿ, ಗೆಲುವನ್ನು ತಮ್ಮದಾಗಿಸಿಕೊಂಡು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಹೇಲ್ ಅಹಮದ್ ಫಾರಿಶ್ ಪಂದ್ಯದ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಗೆದ್ದರೆ, ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಮೊಹಮ್ಮದ್ ಅರ್ಫಾಝ್ ಎ ರವರು ಪಂದ್ಯದ ಅತ್ಯುತ್ತಮ ಸ್ಟ್ರೈಕರ್ ಪ್ರಶಸ್ತಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುತ್ತಾರೆ.

ಈ ವಿದ್ಯಾರ್ಥಿಗಳು ಕಾಲೇಜಿನ ರಾಷ್ಟ್ರಮಟ್ಟದ ಫುಟ್ಬಾಲ್ ತಂಡದ ಕೋಚ್ ಆದಂತಹ ಯು ಎಂ ತಮೀಮ್ ಉಳ್ಳಾಲ್ ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದು, ಈಗಾಗಲೇ ಇವರ ತರಬೇತಿಯಿಂದ ಕಾಲೇಜಿಗೆ ಅನೇಕ ಪ್ರಶಸ್ತಿಗಳು ಲಭಿಸಿರುತ್ತದೆ. ಇವರ ಈ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಶಿಕ್ಷಕ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…