ಕೋಣಾಜೆ, 29 ಆಗಸ್ಟ್ 2025: ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ರವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವೆಂದು ಆಚರಿಸಲಾಗುತ್ತಿದ್ದು ಈ ದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕೋಣಾಜೆ ಇಲ್ಲಿಯ ದೈಹಿಕ ಶಿಕ್ಷಣ ವಿಭಾಗವು ಉಳ್ಳಾಲ ತಾಲೂಕು ವಲಯದ ವಿದ್ಯಾರ್ಥಿಗಳಿಗೆ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿದ್ದು, ಈ ಪಂದ್ಯಾಟದಲ್ಲಿ ಕೆ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವು ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡವನ್ನು 1-0 ಅಂತರದಲ್ಲಿ ಸೋಲಿಸಿ, ಗೆಲುವನ್ನು ತಮ್ಮದಾಗಿಸಿಕೊಂಡು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಹೇಲ್ ಅಹಮದ್ ಫಾರಿಶ್ ಪಂದ್ಯದ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಗೆದ್ದರೆ, ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಮೊಹಮ್ಮದ್ ಅರ್ಫಾಝ್ ಎ ರವರು ಪಂದ್ಯದ ಅತ್ಯುತ್ತಮ ಸ್ಟ್ರೈಕರ್ ಪ್ರಶಸ್ತಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿರುತ್ತಾರೆ.

ಈ ವಿದ್ಯಾರ್ಥಿಗಳು ಕಾಲೇಜಿನ ರಾಷ್ಟ್ರಮಟ್ಟದ ಫುಟ್ಬಾಲ್ ತಂಡದ ಕೋಚ್ ಆದಂತಹ ಯು ಎಂ ತಮೀಮ್ ಉಳ್ಳಾಲ್ ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದು, ಈಗಾಗಲೇ ಇವರ ತರಬೇತಿಯಿಂದ ಕಾಲೇಜಿಗೆ ಅನೇಕ ಪ್ರಶಸ್ತಿಗಳು ಲಭಿಸಿರುತ್ತದೆ. ಇವರ ಈ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಶಿಕ್ಷಕ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…