ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ದ. ಕ. ಜಿ. ಪಂ. ಉ ಹಿ. ಪ್ರಾ. ಶಾಲೆ ಕೊಯಿಲದಲ್ಲಿ ನಡೆಯುತ್ತಿದ್ದು ಅದರ ಉದ್ಘಾಟನೆಯನ್ನು ಎಸ್.ಆರ್.ಕೆ ಲ್ಯಾಡರ್ಸ್ ಪುತ್ತೂರು ಇದರ ಮಾಲಕರಾದ ಶ್ರೀ ಕೇಶವ ಅಮೈ ನೆರವೇರಿಸಿದರು.

ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ತನ್ನ ಚಟುವಟಿಕೆಗಳ ಮೂಲಕ ಮಾಡುತ್ತದೆ. ಒಂದು ವಾರದ ಈ ಶಿಬಿರದಲ್ಲಿ ವಿದ್ಯಾರ್ಥಿಗಳೆಲ್ಲರೂ ವಿವಿಧ ರೀತಿಯ ಜೀವನ ಕೌಶಲಗಳನ್ನ ಕಲಿತುಕೊಂಡು ಭಾರತದ ಸತ್ಪ್ರಜೆಗಳಾಗಿ ಮೂಡಿ ಬರುವಂತಾಗಬೇಕು. ಇಲ್ಲಿ ಸಿಗುವ ವಿವಿಧ ಅವಕಾಶಗಳನ್ನ ಬಳಸಿಕೊಂಡು ನೀವೆಲ್ಲರೂ ಯಶಸ್ಸನ್ನ ಕಾಣುವಂತಾಗಲಿ” ಎಂದು ಶುಭಹಾರೈಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ್ ಕೆ ಇವರು ಮಾತನಾಡುತ್ತಾ ” ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಶಿಕ್ಷಣ ಇಲಾಖೆಯ ಅಧಿಕೃತ ಕಾರ್ಯಕ್ರಮಗಳಲ್ಲಿ ಒಂದು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಉನ್ನತ ಸಾಧನೆಯನ್ನ ಮಾಡಬೇಕು. ವ್ಯಕ್ತಿಗಳೊಂದಿಗೆ ಬೆರೆಯುವ ಮತ್ತು ಆ ಮೂಲಕ ಸಮಾಜವನ್ನು ಮುನ್ನಡೆಸುವ ಗುಣ ಅವರಲ್ಲಿ ಬರಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಶ್ರಮದಾನ, ವಿವಿಧ ತರಬೇತಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಯೋಗ, ಕ್ರೀಡೆ ಇವೆಲ್ಲವೂ ಇರುತ್ತದೆ. ಶಿಬಿರಾರ್ಥಿಯು ಇವೆಲ್ಲದರಲ್ಲಿಯೂ ಕೂಡ ಭಾಗವಹಿಸಬೇಕಾಗುತ್ತದೆ. ಇದರಿಂದ ಅವರ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಹಮ್ಮಿಕೊಂಡಂತಹ ಈ ಈ ಶಿಬಿರ ಇಲಾಖೆಯ, ಶಾಲಾ ಅಭಿವೃದ್ಧಿ ಸಮಿತಿಯ, ಅಧ್ಯಾಪಕ ವರ್ಗದವರ ಮತ್ತು ಸಮಾಜದವರ ಸಹಕಾರದಿಂದ ಯಶಸ್ವಿಯಾಗಿ ನಡೆಯುವಂತಾಗಲಿ. “ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಕೊಯಿಲ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಸುಭಾಷ್ ಶೆಟ್ಟಿ ಆರುವಾರ, ಪ್ರಭಾರ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಅನುಪಮಾ ಕೆ.ಎಂ, ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಪ್ರಗತಿಪರ ಕೃಷಿಕರಾದ ವೀರಪ್ಪ ದಾಸಯ್ಯ, ಆತೂರು ಸದಾಶಿವ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಯದುಶ್ರೀ ಆನೆಗುಂಡಿ, ಶಾಲೆಯ ಶತಮಾನೋತ್ಸವ ಸಮಿತಿಯ ಸದಸ್ಯರಾದ ಬಶೀರ್ ಆತೂರು, ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಉಮೇಶ್ ಎಂ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ ಗೌಡ ಪುತ್ಯೆ ಇವರ ಮಾತನಾಡುತ್ತಾ ” ಎನ್ ಎಸ್ ಎಸ್ ಸ್ವಯಂ ಸೇವಕರಾದ ನೀವೆಲ್ಲರೂ ಈ ಸೇವಾ ಶಿಬಿರದಲ್ಲಿ, ಸಮಾಜ ಕಾರ್ಯದ ಸಂಕಲ್ಪ ಮಾಡಿಕೊಂಡಿದ್ದೀರಿ. ಶ್ರಮದಾನವನ್ನು ಮಾಡುವುದರ ಮೂಲಕ ಈ ಶಾಲೆಯ ಅಭಿವೃದ್ಧಿಗೂ ನಿಮ್ಮ ಸಹಕಾರ ಅತ್ಯಗತ್ಯ. ಶಾಲೆಯ ಅಭಿವೃದ್ಧಿಯೊಂದಿಗೆ, ವಿವಿಧ ತರಬೇತಿಗಳ ಮೂಲಕ ನಿಮ್ಮ ವ್ಯಕ್ತಿತ್ವದ ಅಭಿವೃದ್ಧಿಯು ಆಗುವಂತಾಗಲಿ.” ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯರು ಶಿಬಿರದ ಧ್ವಜ ಮತ್ತು ಸಿಟಿಯನ್ನು ಘಟಕದ ನಾಯಕ – ನಾಯಕಿಗೆ ಹಸ್ತಾಂತರಿಸಿದರು. ಸಹ ಶಿಬಿರ ಅಧಿಕಾರಿಗಳಾದ ಕು. ಅಕ್ಷತಾ ಸ್ವಾಗತಿಸಿದರು. ಶಿಬಿರ ಅಧಿಕಾರಿಗಳಾದ ಶ್ರೀ ಕೀರ್ತನ್ ಧನ್ಯವಾದ ಸಮರ್ಪಿಸಿದರು. ಸಹಶಿಬಿರಾಧಿಕಾರಿಗಳಾದ ಶ್ರೀ ಶಿವಪ್ರಸಾದ್ ಹೊಳ್ಳ ಮತ್ತು ಉಪನ್ಯಾಸಕರಾದ ಚೇತನ್ ಮೊಗ್ರಾಲ್ ಸಹಕರಿಸಿದರು. ಉಪನ್ಯಾಸಕರಾದ ಶ್ರೀ ಚೇತನ್ ಆನೆಗುಂಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಶಹನಿ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…