ಉಜಿರೆ, ಸೆಪ್ಪೆಂಬರ್ 09, 2024 : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆಗಳು ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತಾಡಿ ಹಳ್ಳಿಯ ಜೀವನ ಶೈಲಿ ಅನುಭವ ಹಾಗೂ ಈಗಿನ Artificial Intelligence(AI) ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು “ಕತ್ತಲನ್ನು ಹೋಗಲಾಡಿಸುವ ದೀಪ ನೀವಾಗಿ “ ಎಂದರು.ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಿಜ್ಞಾನ ವಿಷಯ ವೇದಿಕೆಯ ಅಧ್ಯಕ್ಷರಾದ ಶ್ರೀ ರಾಧಕೃಷ್ಣ.ಕೆ ಇವರು ಸ್ವ ಉದ್ಯೋಗ ಕಡೆಗೆ ಗಮನ ಕೊಡಿ ಎಂದರು. ಪ್ರೌಢ ಶಾಲಾ ಶಿಕ್ಷಣ ಸಂಯೋಜಕರು ಹಾಗೂ ಕಾರ್ಯಕ್ರಮದ ನೋಡಲ್ ಅಧಿಕಾರಿಯಾದ ಶ್ರೀ ಸಿದ್ಧಲಿಂಗಸ್ವಾಮಿ ಮಾತಾಡಿ ಸ್ವಚ್ಛತೆಯ ಬಗ್ಗೆ ನಮ್ಮ ಮನೆ ಪರಿಸರ ಸುತ್ತಮುತ್ತಲಿನ ವಾತಾವರಣದ ಸ್ವಚ್ಛತೆಯನ್ನು ಕೃತಕ ಬುದ್ಧಿಮತ್ತೆಯನ್ನು (AI)ಯನ್ನು ಉಪಯೋಗಿಸಿ ಯಾವ ರೀತಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬಹುದು ಎನ್ನುವ ಮಾಹಿತಿ ನೀಡಿದರು.

ಪ್ರೌಢ ಶಾಲಾ ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷಿ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶ್ರೀ ಕೆ.ಸುರೇಶ್ ರವರು ಸ್ವಾಗತಿಸಿದರು. ಶ್ರೀ ರಾಮಕೃಷ್ಣ ಭಟ್ ಸರಕಾರಿ ಪ್ರೌಢಶಾಲೆ ಬದನಾಜೆ ಧನ್ಯವಾದ ಸಮರ್ಪಿಸಿದರು. ರವೀಶ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.