ಪುತ್ತೂರು: ದೇಶದ ಅಭಿವೃದ್ಧಿ ನಮ್ಮ ಕೈಯಲ್ಲಿದೆ. ಹೊಸ ಹೊಸ ಆಲೋಚನೆಗಳ ಮೂಲಕ ದೇಶಕ್ಕೆ ನಮ್ಮದಾದ ಕೊಡುಗೆಗಳನ್ನು ಕೊಡಬಹುದು. ನೂತನ ಉದ್ಯಮಗಳನ್ನು ಆರಂಭಿಸುವ ಮುಖೇನವೂ ದೇಶದ ಪ್ರಗತಿಯಲ್ಲಿ ನಾವು ಭಾಗೀದಾರರಾಗುವುದಕ್ಕೆ ಸಾಧ್ಯವಿದೆ ಎಂದು ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯಾ ವಿ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ ನನ್ನ ಕೊಡುಗೆ’ ಎಂಬ ವಿಷಯದ ಬಗೆಗೆ ಬುಧವಾರ ಮಾತನಾಡಿದರು.

ಸ್ವದೇಶೀ ವಸ್ತುಗಳ ಬಳಕೆಯನ್ನೇ ಮಾಡುತ್ತೇವೆ ಎಂಬ ಸಂಕಲ್ಪವೂ ದೇಶದ ಅಭಿವೃದ್ಧಿಗೆ ಪೂರಕ. ಇಂದು ನಾವು ಬಳಸುತ್ತಿರುವ ಹಲವಾರು ವಸ್ತುಗಳು ವಿದೇಶೀ ಮೂಲದವುಗಳು. ಆದರೆ ನಾವು ಬಳಸುವ ಪ್ರತಿಯೊಂದು ವಿದೇಶೀ ವಸ್ತುವಿಗೂ ಪರ್ಯಾಯವಾಗಿ ಭಾರತೀಯ ವಸ್ತುಗಳು ಲಭ್ಯವಿದೆ ಎಂಬುದನ್ನು ತಿಳಿದುಕೊಳ್ಳಬೇಕು. ನಾವೇ ನಮ್ಮ ದೇಶದ ಉತ್ಪನ್ನಗಳನ್ನು ಖರೀದಿಸದಿದ್ದರೆ ನಾಳೆ ನಾವು ಉದ್ಯಮಿಗಳಾಗಿ ನಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಟ್ಟಾಗ ಜನ ಖರೀದಿ ಮಾಡಬೇಕೆಂದು ಬಯಸುವುದು ಸಾಧುವೆನಿಸುತ್ತದೆಯೇ ಎಂದು ಪ್ರಶ್ನಿಸಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ದೇಶಕ್ಕೆ ನಮ್ಮಿಂದ ಏನೂ ಕೊಡುವುದಕ್ಕೆ ಸಾಧ್ಯವಿಲ್ಲದಿದ್ದರೆ ಕನಿಷ್ಟ ಉಪದ್ರ ಕೊಡದಿರುವುದೇ ಕೊಡುಗೆಯೆನಿಸುತ್ತದೆ. ಆದರೆ ಈ ದೇಶದಲ್ಲಿ ಹುಟ್ಟಿ, ಇಲ್ಲಿನ ಅನ್ನಾಹಾರ ಸೇವಿಸಿ ದೇಶಕ್ಕೇ ಕಂಟಕವೆನಿಸುವವರು ದೇಶದ ಅಭಿವೃದ್ಧಿಗೆ ತೊಡಕಾಗುತ್ತಿದ್ದಾರೆ. ಎಲ್ಲೆಂದರಲ್ಲಿ ಕಸ ಹಾಕದಿರುವುದು, ನೀರು, ಗಾಳಿಗಳನ್ನು ಮಲಿನಗೊಳಿಸದಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ನುಡಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…