ಸವಿನೆನಪುಗಳು ಬೇಕು ಸವಿಯಲು ಬದುಕು-ಹರೀಶ್ ಸುವರ್ಣ

ಕುತ್ಪಾಡಿ, 28 ಮಾರ್ಚ್ 2025: ವಿದ್ಯೆಯೊಂದಿಗೆ ವಿನಯ, ವೃತ್ತಿಗೆ ಗೌರವ, ಕಲಿತ ವಿದ್ಯೆ ಬಳಸುವಿಕೆ, ಪರರಿಗೆ ಸಹಕಾರ, ವಿಚಾರಗಳನ್ನು ಸಂಗ್ರಹಿಸಿ ಬರೆದಿಟ್ಟುಕೊಳ್ಳುವ ಕಲೆ, ಇವೆಲ್ಲವೂ ಎನ್‌.ಎಸ್.ಎಸ್ ನಲ್ಲಿ ತೊಡಗಿಸಿಕೊಳ್ಳುವುದರಿಂದ ಮಾತ್ರ ಲಭಿಸುವುದು, ಹಾಗೆಯೇ ನಿವೃತ್ತಿಯ ನಂತರವೂ ಸದಾ ನೆನಪಿನಲ್ಲಿ ಇರುವುದು ಎನ್. ಎಸ್. ಎಸ್ ಅನುಭವ ಅದಕ್ಕಾಗಿ ಸವಿ ನೆನಪುಗಳು ಬೇಕು ಸವಿಯಲು ಬದುಕು ಎಂದು ಶ್ರೀ ರಾಮಕೃಷ್ಣ ಭಜನಾ ಮಂದಿರ ಕುತ್ಪಾಡಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಹರೀಶ್ ಸುವರ್ಣ ರವರು ಹೇಳಿದರು.

ಅವರು ಕುತ್ಪಾಡಿ ಶ್ರೀ ರಾಮಕೃಷ್ಣ ಭಜನಾ ಮಂದಿರ ಹಾಗು ಸತ್ಯಯುಗ ಯೋಗಾಶ್ರಮ ಇಲ್ಲಿ ನಡೆದ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಸತ್ಯಯುಗ ಯೋಗಾಶ್ರಮದ ಅಧ್ಯಕ್ಷರಾದ ಶ್ರೀ ವಾಮನ ಬಂಗೇರ, ಗ್ರಾಮ ಪಂಚಾಯತ್ ಕಡೆಕಾರು ಇದರ ಉಪಾಧ್ಯಕ್ಷರಾದ ಶ್ರೀ ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಶ್ರೀ ರಘುನಾಥ್ ಕೋಟ್ಯಾನ್, ಲಯನ್ಸ್ ಕ್ಲಬ್ ಉಡುಪಿ ಇದರ ಸ್ಥಳೀಯ ಮುಖ್ಯಸ್ಥೆ ಶ್ರೀಮತಿ ವಿನೋದ ನಾರಾಯಣ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು, ಕಾಲೇಜಿನ ಪ್ರಾಚಾರ್ಯರು ಅಭಿನಂದನಾ ಪತ್ರವನ್ನು ವಿತರಿಸಿದರು. ಅತ್ಯುತ್ತಮ ತಂಡ ಪ್ರಶಸ್ತಿ ಸಿಂಧು ತಂಡ ಭಾಜನವಾಗಿ ಶ್ರೀ ವಾಮನ ಬಂಗೇರ ಅಭಿನಂದಿಸಿದರು.

ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು, ಯೋಜನಾಧಿಕಾರಿ ರಾಜೇಶ್ ಕುಮಾರ್ ಧನ್ಯವಾದ ವಿತ್ತರು. ಕನ್ನಡ ಉಪನ್ಯಾಸಕ ಶಶಿಕಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…