ಕುಂಜಿಬೆಟ್ಟು, 26 ಜುಲೈ 2025: ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಅಧ್ಯಯನ ಘಟಕದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್, ಸಿಎಂಎ – ವೃತ್ತಿ ಆಧಾರಿತ ಕೋರ್ಸ್ ಗಳ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ಜುಲೈ 26 ರಂದು ಜರಗಿತು.

ಟ್ಯಾಪ್ಮಿ ಮಣಿಪಾಲದ ಪ್ರಾಧ್ಯಾಪಕರಾದ ಪ್ರೊ. ನಂದನ್ ಪ್ರಭು ಸಂಪನ್ಮೂಲ ವ್ಯಕ್ತಿಯಾಗಿ ಸಿಎ., ಸಿಎಂಎ., ಸಿಎಸ್., ಐಸಿಡಬ್ಲೂಎ ಕೋರ್ಸ್ ಗಳನ್ನು ಮಾಡುವ ಕುರಿತು ತಿಳಿಸಿದರು. ಒಂದು ವಿಷಯದಲ್ಲಿ ಆಸಕ್ತಿ ಇಲ್ಲದೆ ಹೋದಲ್ಲಿ ತರಗತಿಗೆ ಗೈರುಹಾಜರಾಗುವುದಲ್ಲ, ಬದಲಾಗಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಲು ಮಾರ್ಗ ಕಂಡುಕೊಳ್ಳಬೇಕು, ಸಾಧಿಸಬೇಕೆಂಬ ಉತ್ಕಟ ಪ್ರಜ್ಞೆ ಜಾಗ್ರತವಾಗಬೇಕು, ಪಲಾಯನ ಮಾರ್ಗ ಸಾಧನೆಗೆ ತೊಡಕನ್ನುಂಟು ಮಾಡುತ್ತದೆ, ಭಾಷಾ ಜ್ಞಾನ, ಭಾಷಾ ಕೌಶಲಗಳನ್ನು ಹೆಚ್ಚಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಹಾಗೆಯೇ ಪದವಿಯೊಂದಿಗೆ ಕಂಪ್ಯೂಟರ್ ಆಧಾರಿತ ತಾಂತ್ರಿಕ ತರಬೇತಿ ಪಡೆಯುವುದು ತುಂಬಾ ಅಗತ್ಯ ಅದನ್ನು ನಿಮ್ಮ ಕಾಲೇಜಿನಲ್ಲಿ ನೀಡುತ್ತಿರುವುದು ನಿಮಗೆ ವರದಾನವಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.

ಉಪ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಉಪನ್ಯಾಸಕ ಶ್ರೀ ರಾಜೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…