ಬೆಳ್ತಂಗಡಿ, 26 ನವೆಂಬರ್ 2025: ಒಂದು ಉತ್ತಮ ಸಂವಿಧಾನದಿಂದ ಉತ್ತಮ ದೇಶವನ್ನು ನಿರ್ಮಿಸಬಹುದು ಎಂದು ವಾಣಿ ಪದವಿಪೂರ್ವ ಕಾಲೇಜಿನ ರಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮೀನಾಕ್ಷಿ ಎನ್ ಹೇಳಿದರು. ‌

ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಗಳು ಮತ್ತು ನಾಗರಿಕರು ಭಾರತದ ಶ್ರೀಮಂತ ಪ್ರಜಾಪ್ರಭುತ್ವವನ್ನು ಗೌರವಿಸಲು, ಸಂವಿಧಾನವನ್ನು ಅಧ್ಯಯನ ಮಾಡಲು, ರಾಷ್ಟ್ರವನ್ನು ಏಕೀಕರಿಸುವ ಮೌಲ್ಯಗಳನ್ನು ಬಲಪಡಿಸಲು ಸಂವಿಧಾನ ದಿನವನ್ನು ಆಚರಿಸುವುದು ಮಹತ್ವದ ಕಾರ್ಯವಾಗಿದೆ. ಪ್ರಪಂಚದಲ್ಲೇ ಅತೀ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾದ ಭಾರತದ ಸವಿಂಧಾನವನ್ನು ಕುರಿತಾದ ಜ್ಞಾನವನ್ನು ಪ್ರತಿಯೊಬ್ಬರು ಹೊಂದಬೇಕಾಗಿದೆ. ಡಾ.ಬಿ ಆರ್ ಅಂಬೇಡ್ಕರ್ ಕೇವಲ ಸಂವಿಧಾನವನ್ನು ಮಾತ್ರ ರಚಿಸಲಿಲ್ಲ. ಅದರೊಂದಿಗೆ ಭಾರತದ ಸುಂದರ ಭವಿಷ್ಯವನ್ನೇ ರಚಿಸಿದರು. ಸಂವಿಧಾನ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ಹಾಗೂ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಅತ್ಯಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಸಂವಿಧಾನ ಪೀಠಿಕೆಯನ್ನು ವಾಚಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ದಿನೇಶ್ ಗೌಡ, ಕು ಶ್ರಾವ್ಯ ಘಟಕ ನಾಯಕರಾದ ತೀರ್ಥೇಶ್, ಸುಶ್ಮಿತಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು. ಅಬ್ದುಲ್ ಶಾಹಿದ್ ಧನ್ಯವಾದವಿತ್ತರು . ಮೌಲ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…